ಸ್ಥಳೀಯ ಸುದ್ದಿ

ಕೌಟುಂಬಿಕ ಕಲಹ ಮಕ್ಕಳ ಜೊತೆಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ರಾಯಚೂರು: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ಪಟ್ಟಣದ ಮೇಗಳ‌ಪೇಟೆಯಲ್ಲಿ ನಡೆದಿದೆ.

ಮೇಗಳಪೇಟೆ ಹೊರ ವಲಯದ ಕೃಷಿ ಜಮೀನಿನ ಬಾವಿಗೆ ಹಾರಿ ರಾಮಣ್ಣ(4), ಮುತ್ತಣ್ಣ(3) ಮತ್ತು ತಾಯಿ ಚೌಡಮ್ಮ(34) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಘಟನೆ ಕುರಿತು ಸ್ಥಳಕ್ಕೆ ಮುದಗಲ್ ‌ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Related Articles

Leave a Reply

Your email address will not be published. Required fields are marked *