ಸ್ಥಳೀಯ ಸುದ್ದಿ

ಮೇಲಾಧಿಕಾರಿಗಳಿಂದ ಕಿರುಕುಳ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಪ್ಪುಕುಂಟೆ ಗ್ರಾಮದ ಸೋಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ‌.ಮೃತ ಕಂಡಕ್ಟರ್ ಇತ್ತೀಚೆಗೆ ಪೆರಾಲಿಸಿಸ್ ಕಾಯಿಲೆಗೆ ತುತ್ತಾಗಿದ್ದರು.

ಈ ಮಧ್ಯೆ ಕೆಲಸದ ವೇಳೆ ಶ್ರೀನಿವಾಸಪುರ ಡಿಪೋ ಮ್ಯಾನೇಜರ್ ವೆಂಕಟೇಶ್ ಎಂಬುವವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪ ಕೇಳಿಬಂದಿದ್ದು, ಇದರಿಂದ ಮಾನಸಿಕವಾಗಿ ನೊಂದಿದ್ದ ಸೋಮಾಚಾರಿ ಅವರು, ಇಂದು ಬೆಳಗಿನ ಜಾವ ಅವರ ತೋಟದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *