ಬೆಳಗಾವಿ

ಸಿಎಂ ಗೆ ಮಂಡಿ ನೋವು- ನಾಟಿ ವೈದ್ಯರಿಂದ ಚಿಕಿತ್ಸೆ. ಸಧ್ಯ ಸಿ ಎಂ ಗುಣಮುಖ.

ಬೆಳಗಾವಿ

ಮಂಡಿ ನೋವಿನಿಂದ ಬಲಳುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಂಡಿ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದಾಗ ಮುಖ್ಯಮಂತ್ರಿ ಬೊಮ್ಮಾಯಿ ಬೆಳಗಾವಿಯಲ್ಲಿ ಪ್ರಖ್ಯಾತ ರಾಜ ವೈದ್ಯರಿಂದ ಚಿಕಿತ್ಸೆ ಪಡೆದಿದ್ದಾರೆ.

ಕೋಲಾರ ಜಿಲ್ಲೆಯ ಮೂಲದ ನಾಟಿ ವೈದ್ಯ ಲೋಕೇಶ ಟೆಕಲ್ ಎಂಬುವವರು ಸಧ್ಯ ಗದಗ ಜಿಲ್ಲೆಯ ಕಪತ್ ಗುಡ್ಡದಲ್ಲಿ ವಾಸವಾಗಿದ್ದಾರೆ. ಇವರು ಮುಖ್ಯಮಂತ್ರಿಗಳಿಗೆ ಮಂಡಿ ನೋವಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮಂಡಿ ನೋವಿನ ಚಿಕಿತ್ಸೆಗಾಗಿ ಅಮೇರಿಕೆಗೆ ತೆರಳುತ್ತಿದ್ದಾರೆಂದು ಮತ್ತು ಸಂಕ್ರಾಂತಿ ನಂತರ ರಾಜ್ಯ ಮತ್ತೊಬ್ಬ ಮುಖ್ಯಮಂತ್ರಿಯನ್ನು ಕಾಣಲಿದೆ ಎಂಬ ಸುದ್ದಿ ಹರದಾಡುತ್ತಿದೆ. ಈ ಮಧ್ಯೆ ಮುಖ್ಯಮಂತ್ರಿಗಳು, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವರಿಗೆ ಚಿಕಿತ್ಸೆ ನೀಡಿ ಗುಣಮುಖಗೊಳಿಸಿದ್ದ ಲೋಕೇಶ ಟೇಕಲ್ ಎಂಬುವವರನ್ನು ಸಂಪರ್ಕಿಸಿ ಮಂಡಿ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಗಾಗಲೇ ಲೋಕೇಶ ಟೆಕಲ್ ಎಂಬ ನಾಟಿ ವೈದ್ಯರು ವೈದ್ಯಕೀಯ ಲೋಕಕ್ಕೆ ಸವಾಲಾಗಿದ್ದ ಬ್ಲಾಕ್ ಫಂಗಸಗೆ ಒಳಗಾದ ವ್ಯಕ್ತಿಯೊಬ್ಬರಿಗೆ ಚಿಕಿತ್ಸೆ ನೀಡಿ ಗುಣಮುಖಗೊಳಿಸಿದ್ದು, ಈ ವಿಷಯವನ್ನು ಲಕ್ಷಣ ಸವದಿ ಮೊನ್ನೆ ಮೆಲ್ಮನೆಯಲ್ಲಿ ಪ್ರಸ್ತಾಪಿಸಿದ್ದಾರೆ. ಆಯುಷಗೆ ಸಂಬಂಧಪಟ್ಟಂತೆ ಮೆಲ್ಮನೆಯಲ್ಲಿ ಆಯುಷ್ ವಿಧೇಯಕವನ್ನು ಮಂಡಿಸಲಾಗಿದೆ. ನಾಟಿ ವೈದ್ಯ ಲೋಕೇಶ ಟೆಕಲ್ ಈಗಾಗಲೇ ಕ್ಯಾನ್ಸರ್, ಬ್ಲಾಕ್ ಫಂಗಸ, ಕೊರೋನಾ ಸೇರಿದಂತೆ ವಿವಿಧ ಖಾಯಿಲೆಗಳಿಗೆ ವನಸ್ಪತಿ ಔಷಧ ನೀಡಿ ಯಶಸ್ವಿಯಾಗಿದ್ದಾರೆ.

ಸಧ್ಯ ಮುಖ್ಯಮಂತ್ರಿಗಳು ಮಂಡಿ ನೋವಿನಿಂದ ಗುಣಮುಖರಾಗುತ್ತಿದ್ದು, ಅವರಿಗೆ ದಿನಕ್ಕೆ ಎರಡು ಬಾರಿ ಔಷಧದ ಜೊತೆಗೆ ಮೇಕೆ ಹಾಲು ಕುಡಿಯುವಂತೆ ಬೊಮ್ಮಯಿಯವರಿಗೆ ನಾಟಿ ವೈದ್ಯ ಸಲಹೆ ನೀಡಿದ್ದಾರೆ.

ಮೇಕೆ ಹಾಲಿನಲ್ಲಿ ವಿಟಮಿನ್ ಡಿ ಕೂಡಾ ಇರುವುದರಿಂದ ಅದು ಮೂಳೆಗಳು ಕ್ಯಾಲ್ಶಿಯಂ ಸೆಳೆದುಕೊಳ್ಳಲು ಸಹಾಯ ಮಾಡುತ್ತದೆ.

ಆರ್ತ್ರೈಟಿಸ್ ಹೊಂದಿರುವ ರೋಗಿಗಳಲ್ಲಿ ಆಸ್ಟಿಯೋಪೋರೋಸಿಸ್ ತಡೆಯುವಲ್ಲಿ ಮೇಕೆ ಹಾಲು ಸಶಕ್ತವಾಗಿದೆ ಎನ್ನಲಾಗಿದೆ. ಈಗಾಗಲೇ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಚರ್ಮ ರೋಗದಿಂದ ಗುಣಮುಖರಾಗಿದ್ದು, ಅವರೇ ಮುಂದಾಗಿ ಮುಖ್ಯಮಂತ್ರಿಗಳಿಗೆ ನಾಟಿ ವೈದ್ಯರಿಂದ ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲದೆ ಬ್ಲಾಕ್ ಫಂಗಸನಿಂದಾಗಿ ಸಾವಿನ ಕದ ತಟ್ಟಿದ್ದ ಆನಂದ ಕುಲಾಲಿ ಎಂಬಾತನಿಗೂ, ಲಕ್ಷಣ ಸವದಿಯವರೇ ಚಿಕಿತ್ಸೆ ಕೊಡಿಸಿದ್ದು, ಸಧ್ಯ ಆನಂದ ಕುಲಾಲಿ ಎಂದಿನಂತೆ ಓಡಾಡುತ್ತಿದ್ದಾನೆ.

Related Articles

Leave a Reply

Your email address will not be published. Required fields are marked *

Back to top button