ಸ್ಥಳೀಯ ಸುದ್ದಿ

ಧಾರವಾಡದ ಪಾಲಿಕೆ ಕಚೇರಿಯಲ್ಲಿ ಮಧ್ಯರಾತ್ರಿ ಧ್ವಜಾರೋಹಣ

ಧಾರವಾಡ

ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಧಾರವಾಡ ಕೇಂದ್ರ ಕಚೇರಿಯ ಆವರಣದಲ್ಲಿ 75ಅಡಿ ಎತ್ತರದ ಧ್ವಜಸ್ಥಂಬ ಸ್ಥಾಪನೆಯಾಗಿದ್ದು, ಆಗಸ್ಟ 14 ರಂದು ಮಧ್ಯರಾತ್ರಿ 12.00 ಗಂಟೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ರವರು, ಧ್ವಜಾರೋಹಣ ಮಾಡಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಶ್ರೀಮತಿ ಉಮಾ ಮುಕುಂದ ರವರು, ಸಭಾನಾಯಕರಾದ ಶ್ರೀ ತಿಪ್ಪಣ್ಣ ಮಜ್ಜಿಗಿ ರವರು, ವಿರೋಧ ಪಕ್ಷದ ನಾಯಕರಾದ ಶ್ರೀ ದೋರಾಜ್ ಮನಕುಂಟ್ಲಾ ರವರು, ಪಾಲಿಕೆಯ ಆಯುಕ್ತರಾದ ಶ್ರೀ ಗೋಪಾಲಕೃಷ್ಣ ರವರು, ಆತ್ಮೀಯರಾದ ಶ್ರೀ ಮಹೇಶ ತೆಂಗಿನಕಾಯಿ ರವರು, ಮಹಾನಗರ ಪಾಲಿಕೆಯ ಸರ್ವ ಸದಸ್ಯರು, ಹಿರಿಯರಾದ ಶ್ರೀ ಶ್ರೀಧರ ನಾಡಗೇರ ರವರು, ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button