ಸ್ಥಳೀಯ ಸುದ್ದಿಹುಬ್ಬಳ್ಳಿ

ಅಲ್ಲ್ಹಾ ಮಾಲಿಕ ಮತ್ತು ಜೈ ಭವಾನಿ ಎಂದವರು ಕೂಡ ಅಲ್ಲೆ ನೆಲೆಸಿದ್ದರು: ಬದುಕಿ ಬಂದರು ಆ ನಾಲ್ವರು.

ವರುಣನ ಆರ್ಭಟಕ್ಕೆ ಕುಸಿದ ಮನೆಯ ಗೋಡೆ: ನಾಲ್ವರು ಪ್ರಾಣಾಪಾಯದಿಂದ ಪಾರು…!

ಹುಬ್ಬಳ್ಳಿ: ವರುಣನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಳೆದ ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಹುಬ್ಬಳ್ಳಿಯ ಗಣೇಶಪೇಟೆಯ ಬಿಂದರಗಿ ಓಣಿಯಲ್ಲಿ ಮನೆ ಗೋಡೆ ಕುಸಿದು ಬಿದ್ದಿದ್ದು, ನಾಲ್ಕು ಜನರು ಒಳಗೆ ಸಿಲುಕಿಕೊಂಡ ಘಟನೆ ನಡೆದಿದೆ.

ಹೌದು… ಗೊಡೆ ಕುಸಿಯುತ್ತಿರುವುದನ್ನು ಅರಿತ ಮನೆಯ ಮಾಲೀಕ ಬಸವಂತ ಶಿಂಧೆ, ಪತ್ನಿ ಮೂರು ಮಕ್ಕಳು ಓಡಿ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಕ್ಕದ ಮನೆಯ ಮೇಲೆ ಈ ಮಣ್ಣಿನ ಗೋಡೆ ಬಿದ್ದಿದ್ದು ಅವರ ಮನೆಯಲ ನಾಲ್ಕೂ ಜನ ಸಿಲುಕಿಕೊಂಡಿದ್ದರು. ಸರಿಯಾದ ಸಮಯಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ನಾಲ್ಕು ಜನರನ್ನು ರಕ್ಷಣೆ ಮಾಡಿದ್ದಾರೆ.

ಒಂದೇ ಕುಟುಂಬದ ಆರಿಫ್ ಖಾನ್, ಶೈನಾಜಬಾನು, ಸಾಧಿಕ್ ಹಾಗೂ ನಾಜಿಯಾ ಇವರನ್ನು ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಚಂದ್ರಶೇಖರ ಭಂಡಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರ ಜೀವ ರಕ್ಷಣೆ ಮಾಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button